ಮೋದಿ ಸತ್ತರೇ ಯಾರೂ ಪ್ರಧಾನಿ ಆಗಲ್ವ?: ರಾಜು ಕಾಗೆ

Waves of Karnataka


 ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮದಬಾವಿ ಗ್ರಾಮದಲ್ಲಿ ಮಂಗಳವಾರ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ಸಭೆಯಲ್ಲಿ ಮೋದಿ ವಿರುದ್ಧ ಹರಿಹಾಯ್ದರು. ‘ಮೋದಿ ಸತ್ತರೆ ನಾಳೆ ಇನ್ಯಾರು ದೇಶದ ಪ್ರಧಾನಿ ಆಗಂಗಿಲ್ಲೇನು? ಮೋದಿಯವರು ತೀರ್ಕೋಂಡರು ಅಂದ್ರೆ ದೇಶದ 140 ಕೋಟಿ ಜನಸಂಖ್ಯೆಯೊಳಗೆ ಪ್ರಧಾನ ಮಂತ್ರಿ ಆಗೋರು ಯಾರೂ ಇಲ್ವಾ? ಇದೊಳ್ಳೆ ಕಥೆ ಆಯಿತಲ್ಲ’ ಎಂದು ಹೇಳಿ ಹೊಸ ವಿವಾದ ಸೃಷ್ಟಿಸಿದ್ದಾರೆ.

‘ಈಗಿನ ಯುವಕರು ಮೋದಿ, ಮೋದಿ ಎನ್ನುತ್ತಿದ್ದಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತಿರಾ? ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಮೋದಿ ಕಳೆದ 10 ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಲಕ್ಷಾಂತರ ಯುವಕರು ಪದವಿ ಪಡೆದು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಉದ್ಯೋಗ ಕೊಡಿ ಎಂದರೇ ಪಕೋಡಾ ಮಾರಿ ಎನ್ನುತ್ತಿದ್ದಾರೆ’ ಎಂದು ಶಾಸಕ ಕಿಡಿಕಾರಿದರು.