ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

Waves of Karnataka


 ಬ್ಯಾಂಕ್‌ಗಳಲ್ಲಿ ಪದೇಪದೆ ಹಣ ಅಕ್ರಮ ವರ್ಗಾವಣೆ (Bank Irregularities) ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಮಾಡಿದೆ. ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್‌ ಸುತ್ತೋಲೆ ಹೊರಡಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ಗೆ ಸೂಚನೆ ನೀಡಿದ್ದಾರೆ. ಈ ಎರಡು ಬ್ಯಾಂಕ್‌ಗಳ ಎಲ್ಲ ಬ್ರ್ಯಾಂಚ್‌ಗಳಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಯುನಿವರ್ಸಿಟಿ ಮತ್ತಿತರ ಸಂಸ್ಥೆಗಳು ಠೇವಣಿ, ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯಲು ಸೂಚಿಸಿದ್ದಾರೆ. ಇನ್ನು ಮುಂದೆ ಈ ಎರಡು ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಠೇವಣಿ ಹೂಡಿಕೆ ಇಡಬಾರದು. ಎಲ್ಲ ಇಲಾಖೆಗಳು ಅಕೌಂಟ್ ಕ್ಲೋಷರ್ ವರದಿಯನ್ನು ಸೆ.20ರ ಒಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.