ಎಐಸಿಸಿ ಅಧ್ಯಕ್ಷರ ತವರು ಕಲಬುರಗಿಯಲ್ಲಿ ದಶಕದ ಬಳಿಕ ಸಂಪುಟ ಸಭೆ, ಗರಿಗೆದರಿದ ಕಲ್ಯಾಣದ ನಿರೀಕ್ಷೆ

Waves of Karnataka


 ಒಂದು ದಶಕದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೆಪ್ಟೆಂಬರ್‌ 17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಇದು ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಕಲ್ಯಾಣ ಕರ್ನಾಟಕ ದಿನಾಚರಣೆ ಪ್ರಯುಕ್ತ ಬೆಳಗ್ಗೆ ಸಿಎಂ ಧ್ವಜಾರೋಹಣ ನೆರವೇರಿಸಿ ಸಂಜೆ ಸಚಿವ ಸಂಪುಟ ಸಭೆ ನಡೆಸುತ್ತಿದ್ದು, ಇದರಲ್ಲಿ ಕೈಗೊಳ್ಳಲಿರುವ ನಿರ್ಣಯಗಳು ತೀವ್ರ ಕುತೂಹಲ ಮೂಡಿಸಿವೆ.