ನಾನು ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳಿ ಎಂದು ಎಲ್ಲಿ ಹೇಳಿದ್ದೆ, ನಾನು ಹೇಳಿರೋದು ಹೆಡ್ ಮಾಸ್ಟರ್, ಬಿಇಒ ಮೇಲೆ, ಅವರು ಜವಾಬ್ದಾರಿ ತೆಗೆದುಕೊಳ್ಳಬೇಕು, ವಿದ್ಯಾರ್ಥಿ ಮೇಲೆ ಕ್ರಮ ತಗೊಳ್ಳೋಕೆ ನನಗೇನು ಅಧಿಕಾರ ಇದೆ, ಪ್ರಾಂಶುಪಾಲರು, ಉಪನ್ಯಾಸಕರು ಮಕ್ಕಳನ್ನು ಹತೋಟಿಯಲ್ಲಿಡಬೇಕು, ಅಂದು 640 ಶಾಲೆಗಳು ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. 50 ಸಾವಿರ ಮಕ್ಕಳು ಲೈವ್ ಲ್ಲಿ ನೋಡುತ್ತಿದ್ದರು. ಸರ್ಕಾರದಿಂದ ಮಕ್ಕಳ ಭವಿಷ್ಯಕ್ಕೆ ಮಾಡುತ್ತಿರುವ ಒಂದು ದೊಡ್ಡ ಯೋಜನೆಯದು. ಆ ಯೋಜನೆ ಬಗ್ಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡುವ ಬದಲು ಯಾರೋ ಒಬ್ಬ ವಿದ್ಯಾರ್ಥಿ ವಿದ್ಯಾ ಮಂತ್ರಿಗೆ ಕನ್ನಡ ಮಾತನಾಡಲು ಬರೋದಿಲ್ಲ ಎಂದು ಹೇಳಿದ್ದನ್ನೇ ಹೈಲೈಟ್ ಮಾಡ್ತೀರ, ನಿಮ್ಮ ಮಕ್ಕಳು ಈ ರೀತಿ ಮಾಡಿದ್ದರೆ ಮನೆಯಲ್ಲಿ ಬುದ್ದಿ ಹೇಳುತ್ತಿರಲಿಲ್ಲವೇ, ನಾನಾದ್ರೆ ನನ್ನ ಮಗನಿಗೆ ಬುದ್ದಿ ಹೇಳುತ್ತಿದ್ದೆ ಎಂದು ಗರಂ ಆದರು
ನಾನು ಹೇಳಿರೋದು ಪ್ರಿನ್ಸಿಪಾಲ್, ಬಿಇಒ ವಿರುದ್ಧ ಕ್ರಮ ತಗೊಳ್ಳಿ ಅಂತ,: ಶಿಕ್ಷಣ ಸಚಿವ ಗರಂ
November 22, 2024
Tags